ಸಂಸದ ಪ್ರತಾಪ್ ಸಿಂಹನ ವಿರುದ್ಧ ಮತ್ತೊಂದು ಪ್ರಕರಣ ದಾಖಲು!
ನ್ಯೂಸ್ ಕನ್ನಡ ವರದಿ: ಲೋಕಸಭಾ ಚುನಾವಣೆ ಹತ್ತಿರ ಬಂದಂತೆ ರಾಜ್ಯದಲ್ಲಿ ತೀವ್ರ ರಾಜಕೀಯ ಬೆಳವಣಿಗೆಗಳು ಕಂಡು ಬರುತ್ತಿದ್ದು. ಇಂದು ರಾಜ್ಯದ ಹಲವಾರು ನಾಯಕರು ನಾಮಪತ್ರ ಸಲ್ಲಿಸಿದ್ದರು, ಅದೇ ರೀತಿ ಹಾಲಿ ಮೈಸೂರಿನ ಸಂಸದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಂತರ ಅವರಿಗೆ ಶಾಕಿಂಗ್ ನ್ಯೂಸ್ ಕಾದಿತ್ತು. ಪ್ರತಾಪ್ ಸಿಂಹ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಾಗಿದೆ.
ಫ್ಲೈಯಿಂಗ್ ಸ್ಕ್ಯಾರ್ಡ್ ಸಹಾಯಕ ಚುನಾವಣಾಧಿಕಾರಿ ಉಮೇಶ್ ಅವರು ಪ್ರತಾಪ್ ಸಿಂಹ ವಿರುದ್ಧ ನಗರದ ವಿವಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸರ್ಕಾರಿ ಅಂಚೆ ಕಚೇರಿ ಮೂಲಕ ಬುಕ್ಲೆಟ್ಗಳನ್ನು ತರಿಸಲಾಗಿದೆ ಆದರೆ ಬುಕ್ಲೆಟ್ಗಳಲ್ಲಿ ಪ್ರಚಾರಕರ ಹಾಗೂ ಮುದ್ರಕರ ವಿವರ ಇಲ್ಲ. ಬುಕ್ಲೆಟ್ಗಳ ಮುದ್ರಣ ಸಂಖ್ಯೆ ಲೆಕ್ಕ ಸಿಗದ ಹಿನ್ನಲೆಯಲ್ಲಿ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ.